Kasaragod Padmanabha Sharma Visit to Nanjangud Temple ದಕ್ಷಿಣಕಾಶಿ ಎಂದೇ ಖ್ಯಾತಿ ಪಡೆದಿರುವ ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಅಭಿವೃದ್ದಿ ಕೆಲಸಗಳು ಕುಂಠಿತವಾಗುತ್ತಿದೆ ಅನ್ನೋ ಹಿನ್ನೆಲೆಯಲ್ಲಿ ಅಷ್ಟಮಂಗಲ ಪ್ರಶ್ನೆಯ ಮೊರೆ ಹೋಗಿದ್ದಾರೆ. ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಅಭಿವೃದ್ದಿ ಕೆಲಸಗಳು ಕುಂಠಿತವಾಗಿದ್ದವು. ಹೀಗಾಗಿ ದೇವಸ್ಥಾನದ ಪೂಜಾ ವಿಧಿ ವಿಧಾನಗಳು ಸರಿಯಾಗಿದೆಯಾ ಇಲ್ಲವಾ ಅನ್ನೋ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಕಾಸರಗೋಡಿನ ಪದ್ಮನಾಭ ಶರ್ಮಾ ಅವರನ್ನು ದೇವಸ್ಥಾನಕ್ಕೆ ಕರೆಸಿ ಅಷ್ಟಮಂಗಲ ಪ್ರಶ್ನೆಯನ್ನು ಕೇಳಲಾಯಿತು. ಅಷ್ಟಮಂಗಲದಲ್ಲಿ ದೇವಸ್ಥಾನದ ಪೂಜಾ ವಿಧಿ ವಿಧಾನಗಳು ಹಾಗೂ ವೇದ ಘೋಷ, ಪಾರಾಯಣಗಳಲ್ಲಿ ಕೆಲವು ಲೋಪಗಳಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ದೇವಸ್ಥಾನದ ಪೂಜಾ ವಿಧಿ ವಿಧಾನಗಳನ್ನು ಬದಲಾಯಿಸಲು ನಿರ್ಧರಿಸಿದೆ
Posted on: Sun, 16 Nov 2014 07:45:20 +0000
Trending Topics
Recently Viewed Topics
© 2015