ಆಮ್ ಆದ್ಮೀ ಪಕ್ಷದ ವರಿಷ್ಠ - TopicsExpress



          

ಆಮ್ ಆದ್ಮೀ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್, ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಜಯ್ ಮಾಕೇನ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಅರವಿಂದ್ ಕೇಜ್ರಿವಾಲ್ ಇಂದು ಮಧ್ಯಾಹ್ನ ಮೂರು ಗಂಟೆಗೆ ಜಾಮ್ನಗರ್ ವಿಧಾನ ಸಭೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಅದಕ್ಕೂ ಮೊದಲು ಬೆಳಿಗ್ಗೆ 10 ಗಂಟೆಗೆ ಕೇಜ್ರಿವಾಲ್ ರೋಡ್ ಶೋ ಆರಂಭವಾಗಲಿದೆ. ಮಹಾತ್ಮಾ ಗಾಂಧಿ ಹಲವು ಬಾರಿ ವಾಸ್ತವ್ಯ ಹೂಡಿದ್ದ ದೆಹಲಿಯ ವಾಲ್ಮೀಕಿ ಬಸ್ತಿಯಿಂದ ಕೇಜ್ರಿವಾಲ್ ರೋಡ್ ಶೋ ಆರಂಭಿಸಲಿದ್ದಾರೆ. ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಕೂಡ ಇದೇ ಸ್ಥಳದಿಂದ ತಮ್ಮ ಮಹತ್ವಾಕಾಂಕ್ಷೆಯ ಸ್ವಚ್ಛ ಭಾರತ ಅಭಿಯಾನ ಆರಂಭಿಸಿದ್ದರು. ಕಿರಣ್ ಬೇಡಿ ಕೂಡ ರೋಡ್ ಶೋ ನಡೆಸಲಿದ್ದು ನಂತರ ಕೃಷ್ಣಾನಗರ ವಿಧಾನ ಸಭೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಇನ್ನು ಕಾಂಗ್ರೆಸ್ಸಿನ ಅಜಯ್ ಮಾಕೇನ್, ಸದರ್ ಬಜಾರ್ ವಿಧಾನ ಸಭೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೊದಲೇ ನಿಗದಿ ಪಡಿಸಿದಂತೆ ನಿನ್ನೆಯೇ ನಾಮಪತ್ರ ಸಲ್ಲಿಸಬೇಕಿತ್ತು. ಆದ್ರೆ, ಅವರು ರೋಡ್ ಶೋನಲ್ಲಿ ಮೈ ಮರೆತಿದ್ದರಿಂದ ನಿನ್ನೆ ನಾಮಪತ್ರ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಕೇಜ್ರಿವಾಲ್ ನಾಮಪತ್ರ ಸಲ್ಲಿಸಲಿದ್ದಾರೆ.
Posted on: Wed, 21 Jan 2015 06:39:46 +0000

Trending Topics



Recently Viewed Topics




© 2015